Tuesday, September 17, 2024
spot_img
More

    Latest Posts

    ಕರ್ನಾಟಕದ ನೂತನ ರಾಜ್ಯಪಾಲರಾಗಿ `ತಾವರ್ ಚಂದ್ ಗೆಹ್ಲೋಟ್’ ನೇಮಕ

    ಬೆಂಗಳೂರು: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಥಾವರ್ ಚಂದ್ ಗೆಹ್ಲೋಟ್​ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ.

    ಕೇಂದ್ರ ಸಚಿವ ಹಾಗೂ ರಾಜ್ಯಸಭಾ ನಾಯಕರಾಗಿರುವ ಗೆಹ್ಲೋಟ್​​ಗೆ ರಾಜ್ಯಪಾಲ ಹುದ್ದೆ ನೀಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಂದಿದೆ.

    ಈ ಹಿಂದೆ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಸೇವಾವಧಿ ಮುಗಿದ ಹಿನ್ನೆಲೆ ಗೆಹ್ಲೋಟ್​ ಅವರನ್ನು ನೂತನ ರಾಜ್ಯಪಾಲರಾಗಿ ಗೆಹ್ಲೋಟ್​ ಅವರನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್‌, ಈಗ ರಾಜ್ಯಸಭೆಯ ಸದಸ್ಯರಾಗಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss