Thursday, April 18, 2024
spot_img
More

    Latest Posts

    ಪುತ್ತೂರು: ಶಾಲೆಯ ಅನ್ನ-ಸಾಂಬರ್‌ ಪಾತ್ರೆಗೆ ಬಿದ್ದು ಅಡುಗೆ ದುರಂತ ಅಂತ್ಯ

    ಪುತ್ತೂರು: ಬಿಸಿಯೂಟದ ಅಡುಗೆ ಸಾಂಬಾರ್‌ಗೆ ಕಾಲು ಜಾರಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ದುರಂತ ಅಂತ್ಯ ಕಂಡ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ ಮಾಡಿಕೊಂಡಿರುವಾಗ, ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿ ಇಟ್ಟಿದ್ದ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಬಿಸಿ ಬಿಸಿ ಸಾಂಬಾರ್ ಪ್ರಮೀಳಾ ಮೈ ಮೇಲೆ ಬಿದ್ದು, ಗಂಭೀರ ಗಾಯಗೊಂಡಿದ್ದರು.

    ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಜೂ.12 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss