Tuesday, March 19, 2024
spot_img
More

    Latest Posts

    ಹಿಮಾಲಯಕ್ಕೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ ವೈದ್ಯ ನಾಪತ್ತೆ

    ಬೆಂಗಳೂರು: ಹಿಮಾಲಯಕ್ಕೆ ಚಾರಣಕ್ಕೆಂದು ತೆರಳಿದ್ದ ರಾಜ್ಯದ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಚಂದ್ರಮೋಹನ್ ನಾಪತ್ತೆಯಾಗಿದ್ದು, ಹಿಮಾಲಯಕ್ಕೆ ಟ್ರೆಕಿಂಗ್ ಗೆ ಹೋಗಿದ್ದರು.

    ಜೂನ್ 20ರ ಬಳಿಕ ಚಂದ್ರಮೋಹನ್ ಫೋನ್ ಸ್ವಿಚ್ಡ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

    ಚಂದ್ರಮೋಹನ್ ಬೆಂಗಳೂರಿನ ವಸಂತ ನಗರದ ನಿವಾಸಿಯಾಗಿದ್ದಾರೆ. ಒಂದು ವಾರದಿಂದ ವೈದ್ಯ ಚಂದ್ರಮೋಹನ್ ಸುಳಿವು ಸಿಗದಿರುವುದು ಕುಟುಂಬದವರಲ್ಲಿ ಆತಂಕ ಮನೆ ಮಾಡಿದೆ. ವೈದ್ಯ ನಾಪತ್ತೆಯಾಗಿರುವ ಬಗ್ಗೆ ಕುಟುಂಬದವರು ಇದೀಗ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss