ಉಡುಪಿ, ಮೇ 1: ತುಳುನಾಡ ರಕ್ಷಣಾ ವೇದಿಕೆ (ರಿ.), ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ವತಿಯಿಂದ ಇಂದು ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಡುಪಿ ನಗರದ ಅಕ್ಷಯ ಟವರ್ಸ್ ಸಮೀಪ, ಕಾಪಿಯಾ ಹೋಟೆಲ್ ಬಳಿಯ ಸಿಟಿ ಬಸ್ ನಿಲ್ದಾಣದ ಹತ್ತಿರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲೆಯ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಯೋಗಿಶ್ ವಿ. ಶೆಟ್ಟಿ ಅವರು, ರಾಜ್ಯದಲ್ಲಿ H. D. Kumaraswamy ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ತುಳುನಾಡಿನ ಆಶೋತ್ತರಗಳನ್ನು ಈಡೇರಿಸಲು ಸರ್ವರೀತಿಯ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಈ ಸಂದರ್ಭದಲ್ಲಿ ಉದ್ಯಮಿ ಅಜಿತ್ ಶೆಟ್ಟಿ ಅವರು ಕಾರ್ಮಿಕರ ಪರಿಶ್ರಮ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಕೊಂಡಾಡಿದರು. ಹಿರಿಯ ಕಾರ್ಮಿಕ ನಿರೀಕ್ಷಕರಾದ ವಿಜೇಂದ್ರ ಕೆ. ಅವರು ಕಾರ್ಮಿಕ ಇಲಾಖೆ ನೀಡುತ್ತಿರುವ ವಿವಿಧ ಸೌಲಭ್ಯಗಳು, ಯೋಜನೆಗಳು ಹಾಗೂ ಹಕ್ಕುಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ
ರಿಕ್ಷಾ ಚಾಲಕ ರತ್ನಕರ್ ನಾಯಕ್
ಕಟ್ಟಡ ಕಾರ್ಮಿಕರಾದ ರಮೇಶ್ ಮತ್ತು ನಾಗೇಶ್ ಪೂಜಾರಿ ರವರನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಮತ್ತಿತರ ಅಥಿತಿಗಳು ಸನ್ಮಾನಿತರಿಗೆ ಶಾಲು ಹೊದಿಸಿ ಫಲ ಪುಷ್ಪ ನೀಡಿ ಹಣ್ಣು ಹಂಪಲು ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕರ ಸಾಧನೆಗಳನ್ನು ಗುರುತಿಸಿ ಪ್ರಶಂಸಿಸಲಾಯಿತು.

ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಮಿಕ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರಾದ ಜಯ ಪೂಜಾರಿ ಲಕ್ಷ್ಮಿನಗರ ಹಾಗೂ ಪ್ರಧಾನ ಕಾರ್ಯದರ್ಶಿ ಅವಿನಾಶ್ ಶೆಟ್ಟಿ ಅವರು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.






ಸಭೆಯಲ್ಲಿ ಕಾಪು ತಾಲೂಕು ಅದ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ,ಕಾಪು ಮಹಿಳಾದ್ಯಕ್ಷೆ ಅನುಸೂಯ ಶೆಟ್ಟಿ , ಬೈರಂಪಳ್ಳಿ ಘಟಕ ಅದ್ಯಕ್ಷ ಕ್ರಷ್ಣನಂದ ನಾಯಕ್, ಬ್ರಹ್ಮಾವರ ತಾಲೂಕು ಮಾಜಿ ಅದ್ಯಕ್ಷ ಸತೀಶ್ ಪೂಜಾರಿ ಕೀಳಿಂಜೆ , ಸಂತೋಷ್ ಭಂಡಾರಿ ಗುಲಾಬಿ ಶೆಟ್ಟಿ , ಶಶಿಕಲಾ ಶೆಟ್ಟಿ ರಾಜೇಶ್ವರಿ , ಶಂಕರ್ ಉಡುಪಿ , ಕ್ರಷ್ಣ , ಗುಣಕರ , ನವೀನ್ ಚಂದ್ರ , ಹರಿನಾಕ್ಷಿ , ರಾಜ್ ಭಂಡಾರಿ , ಶ್ರೀದರ್ ಸಂಜೀವ ಪುರುಶೋತ್ತಮ ಮತ್ತಿತರ ಕಾರ್ಮಿಕ ಘಟಕದ ಪ್ರಮುಖರು ಉಪಸ್ಥಿತರಿದ್ದರು

