Saturday, July 20, 2024
spot_img
More

    Latest Posts

    ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ – ತಂದೆ ಸಾವು ಮಗನಿಗೆ ಗಂಭೀರ ಗಾಯ

    ಉಳ್ಳಾಲ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚೆಂಬುಗುಡ್ಡೆ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ ಅಬ್ಬಾಸ್(58) ಎಂದು ಗುರುತಿಸಲಾಗಿದೆ. ಅವರು ಶನಿವಾರ ಬೆಳಗ್ಗೆ ಮಗ ನೌಶಾದ್ ಜತೆ ಬೈಕ್‍ನಲ್ಲಿ ದೇರಳಕಟ್ಟೆಗೆ ತೆರಳಿದ್ದರು. ಈ ಸಂದರ್ಭ ಚೆಂಬುಗುಡ್ಡೆ ಬಳಿ ಕಾರೊಂದು ಬೈಕ್‍ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‍ನಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಈ ಪೈಕಿ ತಂದೆ ಅಬ್ಬಾಸ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನೌಶಾದ್‍ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss