ಉಡುಪಿ: ಲಾಕ್ ಡೌನ್ ಸಡಿಲಿಕೆಯನ್ನು ದುರುಪಯೋಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಅಲ್ಲಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ.ಈ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟವರಾರು? ಹೋಟೆಲುಗಳಲ್ಲಿ 6 ಗಂಟೆ ತನಕ ಜನರು ಸೇರುತ್ತಾರೆ. ಬಸ್ ಗಳಲ್ಲಿ 50ಕ್ಕಿಂತ ಹೆಚ್ಚು ಪ್ರಯಾಣಿಕರು ಕಂಡುಬರುತ್ತಿದ್ದಾರೆ.
ರಾಜಕೀಯ ಪಕ್ಷಗಳಿಗೆ ಕಾರ್ಯಕ್ರಮ ನಡೆಸಲು ಅನುಮತಿ ಕೊಟ್ಟವರು ಯಾರು? ಲಾಕ್ ಡೌನ್ ಸಡಿಲಿಕೆಯನ್ನು ಯಾರೂ ದುರುಪಯೋಗ ಮಾಡಬಾರದು.ಒಂದು ವೇಳೆ ದುರುಪಯೋಗ ಮಾಡಿದರೆ ಅಂಥವರ ವಿರುದ್ಧ ಎಪಿಡೆಮಿಕ್ ಆಕ್ಟ್ ನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತೊಮ್ಮೆ ಎಚ್ಚರಿಗೆ ನೀಡಿದ್ದಾರೆ.