ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜನವರಿ 17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್ನಿಲ್ದಾಣದಿಂದ ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ- ಕರಾವಳಿ ಜಂಕ್ಷನ್-ರಾ.ಹೆ 66 ಮೂಲಕ ಮಂಗಳೂರಿಗೆ ಸಂಚರಿಸಬೇಕು. ಜನವರಿ 17ರಂದು ಸಂಜೆ 4 ಗಂಟೆಯಿಂದ ಕುಂದಾಪುರ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಸಂತೆಕಟ್ಟೆ- ಅಂಬಾಗಿಲು- ನಿಟ್ಟೂರು- ಕರಾವಳಿ ಜಂಕ್ಷನ್- ಬನ್ನಂಜೆ- ಶಿರಿಬೀಡು- ಸಿಟಿ ಬಸ್ಸು ನಿಲ್ದಾಣ- ಐರೋಡಿ ಮೂಲಕ ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅಲ್ಲಿಂದ ಕಿದಿಯೂರು ಹೋಟೆಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ -ಕರಾವಳಿ ಜಂಕ್ಷನ್ -ರಾಷ್ಟ್ರೀಯ ಹೆದ್ದಾರಿ 66 ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
Trending
- ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ.
- ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಉದ್ಯಮಿ ರಾಕೀ ಬಂಧನ
- ಮಂಗಳೂರು : ಸ್ಪೀಕರ್ ಯು.ಟಿ ಖಾದರ್ ರವರಿಂದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ…!
- ಎಂ.ಆರ್. ಪಿ.ಎಲ್ ನಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಸಿಬ್ಬಂದಿಗಳು ಸಾವು, ಓರ್ವ ಗಂಭೀರ
- ಲೋಕಅದಾಲತ್ ನಲ್ಲಿ ಗಂಡ ಹೆಂಡತಿಯ ಒಂದಾಗಿಸಿದ ಪ್ರಧಾನ ಕೌಟುಂಬಿಕ ನ್ಯಾಯಾಲಯ
- ಕರಾವಳಿ ಟೀಮ್ ನ ಅಧ್ಯಕ್ಷರಾದ ನಿಸಾರ್ ಕರಾವಳಿ ಆಜ್ಮಲ್ ಕೊಳಂಬೆ ಹಫೀಜ್ ಕೊಳಂಬೆರವರ ಸಮಾಜಮುಖಿ ಕಾರ್ಯಕ್ರಮ
- ವೆನ್ಲಾಕ್, ಲೇಡಿಗೋಶನ್ ಹಾಗು ಕೆಎಂಸಿ ಹಳೆ ವಿದ್ಯಾರ್ಥಿ ಸಂಘ ಹಾಗು ವೆನ್ಲಾಕ್ ಲೇಡಿ ಗೋಶನ್ ಆಸ್ಪತ್ರೆಗಳ 175 ನೇ ವರ್ಷದ ಆಚರಣಾ ಸಮಿತಿಯ ವತಿಯಿಂದ ಐತಿಹಾಸಿಕ ವೈದ್ಯರ ದಿನಾಚರಣೆ
- ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ