ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜನವರಿ 17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್ನಿಲ್ದಾಣದಿಂದ ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ- ಕರಾವಳಿ ಜಂಕ್ಷನ್-ರಾ.ಹೆ 66 ಮೂಲಕ ಮಂಗಳೂರಿಗೆ ಸಂಚರಿಸಬೇಕು. ಜನವರಿ 17ರಂದು ಸಂಜೆ 4 ಗಂಟೆಯಿಂದ ಕುಂದಾಪುರ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಸಂತೆಕಟ್ಟೆ- ಅಂಬಾಗಿಲು- ನಿಟ್ಟೂರು- ಕರಾವಳಿ ಜಂಕ್ಷನ್- ಬನ್ನಂಜೆ- ಶಿರಿಬೀಡು- ಸಿಟಿ ಬಸ್ಸು ನಿಲ್ದಾಣ- ಐರೋಡಿ ಮೂಲಕ ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅಲ್ಲಿಂದ ಕಿದಿಯೂರು ಹೋಟೆಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ -ಕರಾವಳಿ ಜಂಕ್ಷನ್ -ರಾಷ್ಟ್ರೀಯ ಹೆದ್ದಾರಿ 66 ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು
