ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜನವರಿ 17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್ನಿಲ್ದಾಣದಿಂದ ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ- ಕರಾವಳಿ ಜಂಕ್ಷನ್-ರಾ.ಹೆ 66 ಮೂಲಕ ಮಂಗಳೂರಿಗೆ ಸಂಚರಿಸಬೇಕು. ಜನವರಿ 17ರಂದು ಸಂಜೆ 4 ಗಂಟೆಯಿಂದ ಕುಂದಾಪುರ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಸಂತೆಕಟ್ಟೆ- ಅಂಬಾಗಿಲು- ನಿಟ್ಟೂರು- ಕರಾವಳಿ ಜಂಕ್ಷನ್- ಬನ್ನಂಜೆ- ಶಿರಿಬೀಡು- ಸಿಟಿ ಬಸ್ಸು ನಿಲ್ದಾಣ- ಐರೋಡಿ ಮೂಲಕ ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅಲ್ಲಿಂದ ಕಿದಿಯೂರು ಹೋಟೆಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ -ಕರಾವಳಿ ಜಂಕ್ಷನ್ -ರಾಷ್ಟ್ರೀಯ ಹೆದ್ದಾರಿ 66 ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
Trending
- ಮಾರ್ಚ್ 9 ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿನ ವರೆಗೆ ಪಾದಯಾತ್ರೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಕಚೇರಿಯಲ್ಲಿ ಶಶಿ ಬಂಡಿಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ, ಶಶಿ ಬಂಡಿಮಾರ್ ರವರ ಕನಸು ನನಾಸಾಗಿಸಲು ಪ್ರಯತ್ನಿಸಿ – ಡಾ ಆಕಾಶ್ ರಾಜ್ ಜೈನ್
- ಫೆಬ್ರವರಿ 12 ರಂದು ಸುಳ್ಯ ತಾಲೂಕು ಕಛೇರಿ, ಸುಳ್ಯ ದಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”
- ಪತ್ರಕರ್ತ ಶಶಿ ಬಂಡಿಮಾರ್ ರಿಗೆ ತುಳು ಸಂಘಟನೆಗಳಿಂದ ಶ್ರದ್ಧಾಂಜಲಿ, ತುಳುವಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪ್ರಾಮಾಣಿಕ ವ್ಯಕ್ತಿ ಶಶಿ ಬಂಡಿಮಾರ್ : ತಾರಾನಾಥ ಗಟ್ಟಿ
- ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ