Thursday, April 25, 2024
spot_img
More

    Latest Posts

    ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ – ಉಡುಪಿ ಎಸ್ಪಿ

    ಉಡುಪಿ:ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ.

    ಮಕ್ಕಳ ಕಳ್ಳರು ಇದ್ದಾರೆ ಎಂದು ಬಗ್ಗೆ ಬೇರೆ ದೇಶ, ರಾಜ್ಯಗಳ ವಿಡಿಯೋಗಳನ್ನು ಹರಿಬಿಡಲಾಗುತ್ತಿದ್ದು ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss