Friday, March 29, 2024
spot_img
More

    Latest Posts

    ಉಳ್ಳಾಲ: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

    ಮಂಗಳೂರು ನಗರದ ಹೊರವಲಯದ ಕೋಟೆಪುರ ಸಮೀಪದ ಉಳ್ಳಾಲ ಹೊಯ್ಗೆ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇಂದು ಮಹಿಳೆಯ ಮೃತದೇಹ ಸಂಪೂರ್ಣ ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದ್ದು ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್ ಡಿಸೋಜ, ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ, ಅವರು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಿದರು. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss