ಉಪ್ಪುರು ಪರಾರಿ:
ಪರಿವಾರ ಸಹಿತ ಬೊಬ್ಬರ್ಯ ದೈವಸ್ಥಾನ, ಉಪ್ಪುರು ಪರಾರಿ ಇದರ ನೂತನ ಗರ್ಭಗುಡಿ ನಿರ್ಮಾಣದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ನಿಧಿಕುಂಭ ಸ್ಥಾಪನಾ ಮಹೋತ್ಸವವು ದಿನಾಂಕ 14-12-2026, ಭಾನುವಾರ ಬೆಳಿಗ್ಗೆ 11 ಗಂಟೆ 05 ನಿಮಿಷಕ್ಕೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮವು ವೇದಮೂರ್ತಿ ಶ್ರೀ ಗುರುರಾಜ್ ಭಟ್ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲಕ್ಷ್ಮೀಶ್ ಭಟ್ ಪರಾರಿ ಅವರ ಪೌರೋಹಿತ್ಯದಲ್ಲಿ ಪೂಜಾ ವಿಧಿಗಳು ನಡೆಯಲಿದ್ದು, ಹಿರಿಯ ಪುರೋಹಿತರಾದ ಶ್ರೀಯುತ ಅನಂತರಾಮ್ ಭಟ್ ಪರಾರಿ ಅವರು ನಿಧಿಕುಂಭ ಸ್ಥಾಪನೆಯನ್ನು ನೆರವೇರಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ ಸುವರ್ಣ ಅವರು ಶಿಲಾನ್ಯಾಸ ಕಾರ್ಯಕ್ರಮವನ್ನು ಅಧಿಕೃತವಾಗಿ ನೆರವೇರಿಸಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಸತೀಶ್ ಪೂಜಾರಿ ಕೀಲಂಜೆ, ಗಣಪತಿ ದೇವಸ್ಥಾನ ಆಡಳಿತ ಮುಖ್ಯಸ್ಥರು ಪ್ರಶಾಂತ್ ಸುವರ್ಣ ಮಾಯಾಡಿ, ಉದ್ಯಮಿಗಳು ಹಾಗೂ ಸಮಾಜಸೇವಕರಾದ ನವೀನ್ ಪೆರಡೂರು, ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾವಂಜೆಯ ಆಡಳಿತ ಮುಖ್ಯಸ್ಥ ಸುರೇಶ್ ಬಿ. ಶೆಟ್ಟಿ, ಉಪ್ಪುರು ವ್ಯವಸಾಯ ಸೇವಾ ಸೊಸೈಟಿಯ ಅಧ್ಯಕ್ಷ ರಮೇಶ್ ಎನ್. ಶೆಟ್ಟಿ, ನಗರ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ವಕೀಲರು ಹಾಗೂ ಯುವ ಬಿಲ್ಲವ ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ, ಮಲ್ಪೆ ಸಾಯಿ ಶ್ಯಾಮ್ ಬೋಟ್ ಮಾಲೀಕ ಹರೀಶ್ ಪೂಜಾರಿ (ಮಲ್ಪೆ), ಉಪ್ಪುರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗಾಯತ್ರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಉದ್ಯಮಿ ರಾಜು ಪೂಜಾರಿ, ಕೀಳಿಂಜೆ ದೈವಸ್ಥಾನಗಳ ಆಡಳಿತ ಮೊಕ್ತೇಸರರಾದ ಆದಪ್ಪ ಶೆಟ್ಟಿ, ಆತ್ಮರಾಮ ಪಾಟೀಲ್, ಸ್ಥಳ ದಾನಿಗಳಾದ ಸೀತಾ ನಾಯಕ್, ಪಂಚಾಯತ್ ವಾರ್ಡ್ ಸದಸ್ಯೆ ರಾಜೇಶ್ವರಿ ಮಸ್ಕರೆನ್ಹಸ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಶಾಂತ್ ಶೆಟ್ಟಿ ಹಾವಂಜೆ ಅವರು ಸುಸೂತ್ರವಾಗಿ ನಿರೂಪಿಸಿದರು. ಸುರೇಂದ್ರ ಪೂಜಾರಿ ಹಾವಂಜೆ ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸಹಕಾರ ನೀಡಿದರು. ದೈವಸ್ಥಾನದ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಪುಣ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.



