ಉಡುಪಿ: ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ವೀಣಾ ಬಿ.ಎನ್. ಅವರು ವರ್ಗಾವಣೆ ಹೊಂದಿದ ಸದಾಶಿವ ಪ್ರಭು ಅವರಿಂದ ಅಧಿಕಾರ ಸ್ವೀಕರಿಸಿದರು.
ಸದಾಶಿವ ಪ್ರಭು ಅವರಿಗೆ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ನಡೆಯಿತು. ಎರಡೂ ವರೆ ವರ್ಷಗಳಲ್ಲಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬಂದಿ ಉತ್ತಮವಾದ ಸಹಕಾರ ನೀಡಿದ್ದಾರೆ. ಇದರಿಂದಾಗಿಯೇ ಜಿಲ್ಲೆಯಲ್ಲಿ ಹಲವು ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಯಿತು. ಕೋವಿಡ್-19 ಅವಧಿಯಲ್ಲಿ, ಕ್ವಾರಂಟೈನ್ ಕೇಂದ್ರಗಳು ಮತ್ತು ಕೋವಿಡ್ ಕೇರ್ ಸೆಂಟರ್ಗಳ ನಿರ್ವಹಣೆ ಸವಾಲಿನ ಕೆಲಸವಾಗಿದ್ದು, ಎಲ್ಲ ಇಲಾಖೆಗಳ ಸಹಕಾರದಿಂದ ಯಶಸ್ವಿಯಾಗಿ ನಿಭಾಯಿಸಿದ ಸಾರ್ಥಕತೆ ಸಿಕ್ಕಿದೆ ಎಂದು ಪ್ರಭು ಹೇಳಿದರು.
ಡಿಸಿ ಕೂರ್ಮಾರಾವ್ ಎಂ. ಮಾತನಾಡಿ, ಜಿಲ್ಲೆಯ ಆಡಳಿತ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಪ್ರಭು ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು ಎಂದರು.