Friday, April 19, 2024
spot_img
More

    Latest Posts

    ಮಂಗಳೂರು; ಬೈಕ್ ಮತ್ತು ಬಸ್‌ ನಡುವೆ ಅಪಘಾತ- ನಡು ರಸ್ತೆಯಲ್ಲೇ ಹೊತ್ತಿ ಉರಿದ ವಾಹನ

    ಮಂಗಳೂರು: ಬೈಕ್ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿ ಸಿಟಿ ಬಸ್ ಹಾಗೂ ಬೈಕ್ ಹೊತ್ತಿ ಉರಿದ ಘಟನೆ ನಗರದ ಹಂಪನಕಟ್ಟೆ ಬಳಿಯ ವೆನ್ಲಾಕ್ ಆಸ್ಪತ್ರೆ ಬಳಿ ಇಂದು (ಏ.08) ಮಧ್ಯಾಹ್ನ ನಡೆದಿದೆ. ಬೈಕ್‌ ಸವಾರ ಸ್ಕಿಡ್‌ ಆಗಿ ಬಸ್‌ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನ ಪೆಟ್ರೋಲ್‌ ಟ್ಯಾಂಕ್‌ ಒಡೆದು ಬೆಂಕಿ ಕಾಣಿಸಿಕೊಂಡಿದೆ. ಬಸ್ಸು ಹಾಗೂ ಬೈಕ್ ಎರಡು ವಾಹನಕ್ಕೂ ಬೆಂಕಿ ತಗುಲಿ ಬಸ್‌ ಬಾಗಶಃ ಸುಟ್ಟು ಕರಕಲಾಗಿದೆ. ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದು ಬಂದಿದೆ. ಖಾಸಗಿ ಬಸ್ ಇದಾಗಿದ್ದು, ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕದಳ ಆಗಮಿಸಿ ಬೆಂಕಿ ಶಮನಗೊಳಿಸಿದೆ.

    ಬಸ್ ಹೊತ್ತಿ ಉರಿದ ಕಾರಣ ರಸ್ತೆಯಲ್ಲಿ ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿತ್ತು. ದುರ್ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

    ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss