ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ದ.ಕ.ಜಿಲ್ಲೆಯ ಒಂದು ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆಯಾಗಿದೆ. ಕಳೆದ 6 ವರ್ಷಗಳಲ್ಲಿ ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ರಕ್ತದ ಅವಶ್ಯಕತೆಯಿಂದ ಜೀವನ್ಮರಣದ ಮಧ್ಯೆ ಹೋರಾಟ ಮಾಡುತ್ತಿರುವವರಿಗೆ ರಕ್ತ ಒದಗಿಸಿ ಸಾವಿರಾರು ಮಂದಿಗೆ ಜೀವದಾನ ನೀಡಿ ಅನೇಕ ಕುಟುಂಬದ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ.
ಬರೇ ರಕ್ತದಾನ ಮಾತ್ರವಲ್ಲದೆ ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ದಾಖಲಿಸಿ ಅವರ ಚಿಕಿತ್ಸೆಗೆ ಬೇಕಾಗುವ ಎಲ್ಲಾ ರೀತಿಯ ನೆರವನ್ನು ನೀಡುತ್ತಾ ಬಂದಿದೆ.
ವಿಕಲ ಚೇತನರಿಗೆ ಬೇಕಾಗುವ ವೀಲ್ ಚೆಯರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಮುಂತಾದ ಪರಿಕರಗಳನ್ನು ನಿರಂತರವಾಗಿ ನೀಡುತ್ತಾ ಬಂದಿದೆ.

ಬಡ ಹೆಣ್ಣುಮಕ್ಕಳ ಮದುವೆಗೆ ಬೇಕಾಗುವ ಒಳ್ಳೆಯ ಗುಣಮಟ್ಟದ ಸೀರೆ, ಚೂಡಿದಾರ, ವಾಚು ಇತ್ಯಾದಿಗಳನ್ನು ನೀಡುತ್ತಾ ಬಡ ಹೆಣ್ಣುಮಕ್ಕಳ ತಂದೆ ತಾಯಂದಿರ ಸಂಕಷ್ಟಕ್ಕೆ ನೆರವಾಗುವ ಕೆಲಸವನ್ನು ಮಾಡುತ್ತಾ ಬಂದಿದೆ.
ಆರ್ಥಿಕವಾಗಿ ಹಿಂದುಳಿದವರಿಗೆ ವಾಯ್ಸ್ ಬ್ಲಡ್ ಡೋನರ್ಸ್ ನಿರಂತರವಾಗಿ ಸಹಾಯ ಮಾಡುತ್ತಾ ಜನರ ನಂಬಿಕೆಯನ್ನು ಉಳಿಸಿಕೊಂಡಿದೆ. ಆದುದರಿಂದ ನಮ್ಮ ಸಮಾಜ ಸೇವಾ ಚಟುವಟಿಕೆಗಳಿಗೆ ಇನ್ನಷ್ಟು ವೇಗವನ್ನು ನೀಡುವ ಉದ್ದೇಶದಿಂದ ವಾಯ್ಸ್ ಆಫ್ ಟ್ರಸ್ಟ್ ಎಂಬ ಹೆಸರಿನಲ್ಲಿ ನಮ್ಮ ಸಹಸಂಸ್ಥೆಯನ್ನು ಹುಟ್ಟು ಹಾಕಿದ್ದೇವೆ. ಇದರ ಮೂಲಕ ಬಡಜನರ ಸೇವೆಯನ್ನು ಬಹಳ ಪರಿಣಾಮಕಾರಿಯಾಗಿ ಮಾಡಬೇಕು, ಹಸಿದವರ ಹೊಟ್ಟೆ ತಣಿಸುವ ಕೆಲಸ, ಅಶಕ್ತ ಅನಾರೋಗ್ಯ ಪೀಡಿತರಿಗೆ ನಮ್ಮ ಕೈಯ್ಯಲ್ಲಾದ ನೆರವು ನೀಡಬೇಕು, ಬಡ ಹೆಣ್ಣು ಮಕ್ಕಳ ಕಣ್ಣೀರು ಒರೆಸುವ ಪುಣ್ಯ ಕಾರ್ಯ ಮಾಡಬೇಕು ಎಂಬ ಹತ್ತು ಹಲವಾರು ಕನಸುಗಳನ್ನು ಹೊತ್ತುಕೊಂಡು ಮುಂದೆ ಹೆಜ್ಜೆಯನ್ನು ಇಟ್ಟಿದ್ದೇವೆ. ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಕೊಡುಗೈ ದಾನಿ, ಸಮಾಜ ಮುಖಿ ಚಿಂತಕ, ಉತ್ಸಾಹಿ ಯುವ ತರುಣ, ಉತ್ತಮ ಸಮಾಜ ಸೇವಕ ಝಹೀರ್ ಅಬ್ಬಾಸ್ ರವರನ್ನು ಆಯ್ಕೆ ಮಾಡಲಾಗಿದೆ.
ಝಹೀರ್ ಅಬ್ಬಾಸ್ ರವರು ಬಡವರ ಬಗ್ಗೆ ಕನಿಕರ ಉಳ್ಳ ಓರ್ವ ಪ್ರಾಮಾಣಿಕ ಹಾಗೂ ಯಾವುದೇ ಕೆಲಸಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುವ ಸಮರ್ಥ ವ್ಯಕ್ತಿಯಾಗಿದ್ದಾರೆ. ಈಗಾಗಲೇ ವಾಯ್ಸ್ ಆಫ್ ಬ್ಲಡ್ ಡೋನರ್ಸ್ನ ಸಂಚಾಲಕರಾಗಿದ್ದುಕೊಂಡು ತನ್ನ ಸ್ವಂತ ಖರ್ಚಿನಿಂದ ಅದೆಷ್ಟೋ ಬಡ ಹೆಣ್ಣು ಮಕ್ಕಳ ಮದುವೆಗೆ ಬೇಕಾಗುವ ಉಡುಗೆ ತೊಡುಗೆ ಸಹಿತ ವಿವಿಧ ಸಾಮಾಗ್ರಿ, ಧಾರ್ಮಿಕ ಹಾಗೂ ಲೌಕಿಕ ವಿದ್ಯಾಭ್ಯಾಸದಲ್ಲಿ ಮುಂದಿರುವ ಬಡ ವಿದ್ಯಾರ್ಥಿಯಾಗಳಿಗೆ ಹಾಫಿಳ್ ಮತ್ತು ಉನ್ನತ ಶಿಕ್ಷಣಕ್ಕೆ ನೆರವು, ಅಶಕ್ತ ಅನಾರೋಗ್ಯ ಪೀಡಿತರಿಗೆ ಸಹಾಯ, ವಿಕಲ ಚೇತನರಿಗೆ ವೀಲ್ ಚೆಯರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ಕೊಡುಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಮನೆಕಟ್ಟಲು ನೆರವು, ಬಡ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹೊಲಿಗೆಯಂತ್ರ ವಿತರಣೆ, ಕೊರೋನಾ ಕಾಲದಲ್ಲಿ ಹಸಿದವರ ಹೊಟ್ಟೆ ತಣಿಸಲು ಬೇಕಾಗುವ ಸಮಗ್ರ ಆಹಾರ ಕಿಟ್ ವಿತರಣೆ, ಹೀಗೆ ಯಾವುದೇ ಪಲಾಪೇಕ್ಷೆ ಇಲ್ಲದೆ ಸಮಾಜ ಸೇವೆಯ ಎಲ್ಲ ರಂಗಗಳಲ್ಲೂ ವ್ಯಯಕ್ತಿಕವಾಗಿ ಬಹಳಷ್ಟು ಕೊಡುಗೆಯನ್ನು ನೀಡಿದವರಾಗಿದ್ದಾರೆ. ಆದುದರಿಂದಲೇ ವಾಯ್ಸ್ ಆಫ್ ಟ್ರಸ್ಟಿಗೆ ಓರ್ವ ಸೂಕ್ತ ವ್ಯಕ್ತಿಯನ್ನು ನಾವು ಅಧ್ಯಕ್ಷ ಸ್ಥಾನಕ್ಕೆ ಆರಿಸಿದ್ದೇವೆ.
ಇವರ ಪದಗ್ರಹಣ ಸಮಾರಂಭ ಇದೇ ಬರುವ ದಿನಾಂಕ: 20-09-2023 ರಂದು ಮಂಗಳೂರು ರಾವ್ & ರಾವ್ ಸರ್ಕಲ್ ಬಳಿಯಿರುವ ಸಿಟಿ ಟವರ್ ನ ಆವರಣದಲ್ಲಿ ನೆರವೇರಲಿದೆ.
ಆ ದಿನ ಅನ್ನದಾನ, ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ವಿಕಲ ಚೇತನರಿಗೆ ವೀಲ್ ಚೆಯರ್ ವಾಕರ್, ವಾಕಿಂಗ್ ಸ್ಟಿಕ್, ವಾಟರ್ ಬೆಡ್ ಮುಂತಾದ ಪರಿಕರಗಳ ವಿತರಣೆ
ಒಂದು ಬಡ ಹೆಣ್ಣಿನ ಮದುವೆಯ ಸಂಪೂರ್ಣ ಖರ್ಚು ವೆಚ್ಚ ನೀಡುವಿಕೆ ಅಲ್ಲದೆ ಅದೇ ದಿನ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಇದರ 6ನೇ ವಾರ್ಷಿಕೋತ್ಸವ ವಾಯ್ಸ್ ಆಫ್ ಟ್ರಸ್ಟಿನ ಉದ್ಘಾಟನೆ ನೆರವೇರಲಿದೆ.