ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದದ ಮಧ್ಯೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್ ಆಚಾರ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ. ನಾನು ಹಿಜಾಬ್ ಪರ ಇರಲಿಲ್ಲ, ಪ್ರತಿಭಟನೆ ಬೇಡ ಎಂದು ಹೇಳಿದ್ದೆ. ನನ್ನ ಬಗ್ಗೆ ತಪ್ಪು ಕಲ್ಪನೆಯಿಂದ ನನ್ನ ವಿರುದ್ಧ ಪ್ರತಿಭಟನೆ ನಡೆದಿದೆ. ಈ ವಿಚಾರದಲ್ಲಿ ನಾನು ಬಲಿಪಶು ಆಗಿದ್ದೇನೆ ಎನ್ನಿಸುತ್ತಿದೆ.
ಇದು ನನ್ನ ವೈಯಕ್ತಿಕ ನಿರ್ಧಾರ. ಹೀಗಾಗಲೇ ಎರಡು ವರ್ಷದಿಂದ ಕಾಲೇಜು ನಡೆದಿಲ್ಲ. ಈಗಲೂ ಸಮಸ್ಯೆಯಾದರೆ ತರಗತಿಗಳು ಮಿಸ್ ಆಗುತ್ತವೆ. ವಿದ್ಯಾರ್ಥಿಗಳ ಪರ ಹೋರಾಟದಲ್ಲಿ ಸದಾ ಇರುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು