ಬೆಂಗಳೂರು : ನಗರದಲ್ಲಿ ಪ್ರಿಯಕರನೊಂದಿಗೆ ಸರಸ ಸಲ್ಲಾಪಕ್ಕೆ ಅಡ್ಡಿಯಾಗುತ್ತಾನೆಂದು ಪತಿಯನ್ನೇ ಕೊಂದು ನಾಟಕವಾಡಿದ್ದ ಪತ್ನಿಯನ್ನು ಯಶವಂಪುರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಪತ್ನಿಯಿಂದ ಕೊಲೆಯಾದ ಪತಿ ಶಂಕರ್ ರೆಡ್ಡಿ ಎಂದು ತಿಳಿದು ಬಂದಿದೆ.
ಪತಿಯನ್ನು ಕೊಲೆ ಮಾಡಿದ್ದ ಪತ್ನಿ ಡಿಲ್ಲಿರಾಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ಠಾಣಾ ವ್ಯಾಪ್ತಿಗೆ ಬರೋ ಜೆ.ಪಿ ಪಾರ್ಕ್ ಮುಖ್ಯರಸ್ತೆಯಲ್ಲಿ ಘಟನೆ ನಡೆದಿತ್ತು ಎಂದು ತಿಳಿಯಲಾಗಿದೆ. ವೃತ್ತಿಯಲ್ಲಿ ಅಕೌಂಟೆಂಟ್ ಆಗಿದ್ದ ಶಂಕರ್ ರೆಡ್ಡಿ, ಆಂಧ್ರ ಪ್ರದೇಶದ ಚಿತ್ತೂರು ಮೂಲದ ಪತ್ನಿಯೊಂದಿಗೆ ಯಶವಂತಪುರದ ಮೋಹನ್ ಕುಮಾರ್ ನಗರದಲ್ಲಿ ನೆಲೆಸಿದ್ದರು. ಆದರೆ ಏ.28ರ ರಾತ್ರಿ ಶಂಕರ್ ರೆಡ್ಡಿಯನ್ನು ಕೊಲೆ ಮಾಡಲಾಗಿತ್ತು. ಇದೇ ವೇಳೆ ಪತ್ನಿ ಡಿಲ್ಲಿರಾಣಿ ಕೂಡ ಪತಿಯ ಮೃತದೇಹದ ಪಕ್ಕದಲ್ಲೇ ಮಲಗಿ ಸತ್ತು ಹೋದವಳಂತೆ ನಾಟಕ ಮಾಡಿದ್ದಳಂತೆ.
ಕೊಲೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಡಿಲ್ಲಿರಾಣಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಳು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸ್ರಿಗೆ ಆಶ್ಚರ್ಯಕರ ವಿಚಾರ ಗೊತ್ತಾಗಿದ್ದು.. ಗಂಡನನ್ನ ಹೆಂಡ್ತಿ ರಾಣಿ ಎಂಬಾಕೆಯೇ 28ನೇ ತಾರೀಕು ರಾತ್ರಿ ತನ್ನ ಕೈಯ್ಯಾರ ಚೂರಿಯಿಂದ ಇರಿದು ಕೊಲೆ ಮಾಡಿದ್ಳು ಅನ್ನೋದು ಗೊತ್ತಾಗಿದೆ. ಕಾರಣ ಆಕೆಗೆ ತನ್ನೂರಿನ ಓರ್ವ ವ್ಯಕ್ತಿ ಜೊತೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಈಗ ಪಾಪಿ ಪತ್ನಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆಕೆ ತನ್ನ ಅಕ್ರಮ ಸಂಬಂಧದ ವಿಚಾರದಲ್ಲಿ ಪತಿಯ ಕೊಲೆ ನಡೆಸಿದ್ದಾಳೆ ಎಂದು ಒಪ್ಪಿಕೊಂಡಿದ್ದಾಳೆ. ಹೆಣ್ಣಿನ ನಾಟಕ ಮತ್ತು ಹೆಣ್ಣಿನ ಮುಗ್ಧ ಮುಖದ ಹಿಂದಿನ ಕ್ರೂರತೆ ಕಂಡು ಪೊಲೀಸರು ಬೆರಗಾದರು.