ಕುಂದಾಪುರ: ಜಿಲ್ಲೆಯ ಕುಂದಾಪುರ ತಾಲೂಕಿನ ಸೌಕೂರಿನಲ್ಲಿ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ಗೆ ವಿದ್ಯುತ್ ತಂತಿಗೆ ತಗುಲಿ ಯುವಕನೊಬ್ಬ ಸಾವಮ್ನಪ್ಪಿದ ಘಟನೆ ಸಂಭವಿಸಿದೆ.ಘಟನೆಯಲ್ಲಿ ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ್ದಾರೆ.
ಮೃತಪಟ್ಟ ಯುವಕ ಸೌಕೂರು ನಿವಾಸಿ ಪ್ರಶಾಂತ ದೇವಾಡಿಗ (26) ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಶ್ರೀಧರ ದೇವಾಡಿಗ(45) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೆವಸ್ಥಾನದ ವಾರ್ಷಿಕ ಜಾತ್ರೆ ಆಯೋಜಿಸಲಾಗಿತ್ತು.ಆ ಪ್ರಯುಕ್ತ ನಿನ್ನೆ ರಾತ್ರಿ ಹಬ್ಬಕ್ಕೆ ಶುಭಕೋರುವ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಪ್ಲೆಕ್ಸ್ ಕಟ್ಟುತ್ತಿದ್ದ ಸ್ಥಳದ ಸಮೀಪವೇ ಟ್ರಾನ್ಸ್ಫಾರ್ಮರ್ ತಂತಿ ಹಾದು ಹೋಗಿದ್ದು ಇದರ ಅರವಿಗೆ ಬಾರದೇ ಫ್ಲೆಕ್ಸ್ ಮೇಲಕ್ಕೆತ್ತಿ ಕಟ್ಟುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿದೆ. ಕೂಡಲೇ ಇಬ್ಬರನ್ನು ರಕ್ಷಿಸುವ ಪ್ರಯತ್ನ ನಡೆಸಲಾಯಿತಾದರೂ ಅಷ್ಟರಲ್ಲಾಗಲೇ ಪ್ರಶಾಂತ ದೇವಾಡಿಗ ಸಾವನ್ನಪ್ಪಿದ್ದರು.
©2021 Tulunada Surya | Developed by CuriousLabs