2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮೀನುಗಾರಿಕೆ ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು. ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು. ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Trending
- ಮುಲ್ಕಿ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ ರಸ್ತೆ ಅಪಘಾತದಲ್ಲಿ ದುರ್ಮರಣ ಅಧ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಸಂತಾಪ
- ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ಟಿ-55 ಯುದ್ಧ ಟ್ಯಾಂಕ್ ಲೋಕಾರ್ಪಣೆ: ದೇಶಭಕ್ತಿಯ ಸಂಕೇತವಾಗಿ ಸಾರ್ವಜನಿಕರಿಗೆ ಸಮರ್ಪಣೆ
- ಉಡುಪಿ: ಆಟಿಡೊಂಜಿ ದಿನಾಚರಣೆಗೆ ಭರ್ಜರಿ ಸಿದ್ಧತೆ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪೂರ್ವಭಾವಿ ಸಭೆ ಯಶಸ್ವಿ
- ನ್ಯಾಯದ ಮೇಲಿನ ನಂಬಿಕೆಗೆ ಮತ್ತೊಂದು ಬಲ — ಮನೀಷ್ಗೆ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು
- ಪಳ್ಳಿ ದರ್ಸ್ ಉದ್ಘಾಟನೆ: ಮಲ್ಲಾರು–ಮಜೂರಿನಲ್ಲಿ ಜ್ಞಾನ ದೀಪ ಬೆಳಗಿತು
- ಮಂಗಳೂರು: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್ನಿಂದ ಭವ್ಯ ಸನ್ಮಾನ
- ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ ಹಾಗೂ ಡಿಜಿಟಲೀಕರಣಕ್ಕೆ ಮೂಡುಬಿದಿರೆಯಲ್ಲಿ ಚಾಲನೆ
- ಮದ್ಯಪಾನ ಮಾಡಿ ವಾಹನ ಚಲಾಯಿಸಿ ಮೃತಪಟ್ಟರೆ ಪೂರ್ಣ ವಿಮಾ ಪರಿಹಾರವಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
