ಮಂಗಳೂರು, ಮೇ 12(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮತ್ತು ಕನ್ನಡ ಸಂಘ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಹಕಾರದೊಂದಿಗೆ ಭಗವಾನ್ ಬುದ್ಧ ಜಯಂತಿ ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿ.ವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯವಂತ ನಾಯಕ ಉದ್ಘಾಟಿಸಿ ಮಾತನಾಡಿದರು. ಬುದ್ಧ ಕೇವಲ ವ್ಯಕ್ತಿಯಲ್ಲ ಅವರು ಮಹಾನ್ ಬೆಳಕು.ಶ್ರಮ ವಹಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬುದ್ಧನಾಗಬಹುದು. ಕಾಮ, ಕ್ರೋಧ, ಮದ, ಮತ್ಸರ ಇವುಗಳಿಂದ ದೂರವಿದ್ದು, ಬುದ್ಧನ ವಿಚಾರಧಾರೆಗಳನ್ನು ಅರಿತುಕೊಂಡಾಗ ಶಾಂತಿ ನೆಲೆಯೂರುತ್ತದೆ. ಬುದ್ಧನ ಸಂದೇಶಗಳನ್ನು ಎಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಉಪನ್ಯಾಸ ನೀಡಿದ ಮಂಗಳಗಂಗೋತ್ರಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಬಿತಾ ಮಾತನಾಡಿ, ಗೌತಮ ಬುದ್ಧನು ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಬಯಸುತ್ತಾನೆ. ಯಾವಾಗಲೂ ಜನರಿಗೆ ಅಹಿಂಸೆಯ ಅರ್ಥವನ್ನು ಕಲಿಸಲು ಪ್ರಯತ್ನಿಸಿದವರು. ಜಗತ್ತಿನಲ್ಲಿ ಎಷ್ಟು ಶ್ರೀಮಂತನಾಗಿದ್ದರೂ ಜೀವನದಲ್ಲಿ ದುಃಖವಿಲ್ಲದವನು ಯಾರು ಇಲ್ಲ ಎಂದು ಗೌತಮ ಬುದ್ಧ ಹೇಳುತ್ತಾರೆ. ಹಾಗಾಗಿ ದುಃಖದಿಂದ ಹೊರಬರುವ ಮಾರ್ಗವನ್ನು ಕಂಡುಹಿಡಿಯುತ್ತಾರೆ. ಬುದ್ಧನ ಪ್ರಕಾರ ಮನುಷ್ಯನ ಅತಿಯಾದ ಆಸೆಗಳೇ ದುಃಖಕ್ಕೆ ಮೂಲ ಕಾರಣ. ಒಬ್ಬ ವ್ಯಕ್ತಿಯು ತನಗೆ ಅಗತ್ಯಕ್ಕಿಂತ ಹೆಚ್ಚಿನದನ್ನು ಬಯಸಬಾರದು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಾಧವ. ಕೆ ವಂದಿಸಿದರು.
Trending
- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
