ಮಂಗಳೂರು, ಮೇ 12(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮತ್ತು ಕನ್ನಡ ಸಂಘ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಹಕಾರದೊಂದಿಗೆ ಭಗವಾನ್ ಬುದ್ಧ ಜಯಂತಿ ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿ.ವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯವಂತ ನಾಯಕ ಉದ್ಘಾಟಿಸಿ ಮಾತನಾಡಿದರು. ಬುದ್ಧ ಕೇವಲ ವ್ಯಕ್ತಿಯಲ್ಲ ಅವರು ಮಹಾನ್ ಬೆಳಕು.ಶ್ರಮ ವಹಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬುದ್ಧನಾಗಬಹುದು. ಕಾಮ, ಕ್ರೋಧ, ಮದ, ಮತ್ಸರ ಇವುಗಳಿಂದ ದೂರವಿದ್ದು, ಬುದ್ಧನ ವಿಚಾರಧಾರೆಗಳನ್ನು ಅರಿತುಕೊಂಡಾಗ ಶಾಂತಿ ನೆಲೆಯೂರುತ್ತದೆ. ಬುದ್ಧನ ಸಂದೇಶಗಳನ್ನು ಎಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಉಪನ್ಯಾಸ ನೀಡಿದ ಮಂಗಳಗಂಗೋತ್ರಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಬಿತಾ ಮಾತನಾಡಿ, ಗೌತಮ ಬುದ್ಧನು ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಬಯಸುತ್ತಾನೆ. ಯಾವಾಗಲೂ ಜನರಿಗೆ ಅಹಿಂಸೆಯ ಅರ್ಥವನ್ನು ಕಲಿಸಲು ಪ್ರಯತ್ನಿಸಿದವರು. ಜಗತ್ತಿನಲ್ಲಿ ಎಷ್ಟು ಶ್ರೀಮಂತನಾಗಿದ್ದರೂ ಜೀವನದಲ್ಲಿ ದುಃಖವಿಲ್ಲದವನು ಯಾರು ಇಲ್ಲ ಎಂದು ಗೌತಮ ಬುದ್ಧ ಹೇಳುತ್ತಾರೆ. ಹಾಗಾಗಿ ದುಃಖದಿಂದ ಹೊರಬರುವ ಮಾರ್ಗವನ್ನು ಕಂಡುಹಿಡಿಯುತ್ತಾರೆ. ಬುದ್ಧನ ಪ್ರಕಾರ ಮನುಷ್ಯನ ಅತಿಯಾದ ಆಸೆಗಳೇ ದುಃಖಕ್ಕೆ ಮೂಲ ಕಾರಣ. ಒಬ್ಬ ವ್ಯಕ್ತಿಯು ತನಗೆ ಅಗತ್ಯಕ್ಕಿಂತ ಹೆಚ್ಚಿನದನ್ನು ಬಯಸಬಾರದು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಾಧವ. ಕೆ ವಂದಿಸಿದರು.
Trending
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
