ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Trending
- ಭಾರತ ದಾಳಿಗೆ ಪಾಕಿಸ್ತಾನ ತತ್ತರ
- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
- ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
- Kannada Sangha Bahrain has elected a new Executive Committee
- ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
- ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
- ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
- ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ